ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm