ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm