ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm