ಬ್ರೇಕಿಂಗ್ ನ್ಯೂಸ್
13-06-24 04:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪೊಲೀಸ್ ಠಾಣೆಯನ್ನ ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ.
ಹೌದು. ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಕೊಲೆಗಡುಕರು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಅಂತೇ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿನ್ನೆಯವರೆಗೆ ಅಭಿಮಾನಿಗಳು ಠಾಣೆಯ ಮುಂದೆ ಜಮಾಯಿಸಿದ್ದರು. ಈ ವೇಳೆ ಠಾಣೆ ಮುಂದೆ ಬ್ಯಾರಿಕೇಡ್ಗಳನ್ನು ಹಾಕಿದ್ದರು. ಆದರೆ ಇಂದು ಅಭಿಮಾನಿಗಳು ಕೂಡ ಠಾಣೆಯತ್ತ ಸುಳಿದಿಲ್ಲ. ಆದರೂ ಠಾಣೆಯ ಕಾಂಪೌಂಡ್ಗೆ ಶಾಮಿಯಾನ ಕಟ್ಟಿದ್ದು, ಭಾರೀ ಅನುಮಾನ ಹುಟ್ಟಿಸಿದೆ. ಮೊನ್ನೆ ಆರೋಪಿಗಳಿಗೆ ಠಾಣೆ ಒಳಗೆ ಬಿರಿಯಾನಿ ಕೊಟ್ಟಿದ್ದರು ಎಂದು ಹೇಳಲಾಗುತ್ತಿತ್ತು. ಈ ಬೆನ್ನಲ್ಲೇ ಇಂದು ಶಾಮಿಯಾನದಿಂದ ಮುಚ್ಚಿರುವುದು ಠಾಣೆ ಒಳಗಡೆ ಆರೋಪಿಗಳಿಗೆ ರಾಜಮರ್ಯಾದೆ ಕೊಡಲಾಗುತ್ತಿದೆಯಾ..? ಇವುಗಳನ್ನು ಮಾಧ್ಯಮಗಳಿಂದ ಮುಚ್ಚಿಡಲು ಈ ರೀತಿ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಸಾರ್ವಜನಿಕರಿಗೂ ಪ್ರವೇಶ ನಿರ್ಬಂಧಿಸಿ ಠಾಣೆ ಕ್ಲೋಸ್ ಮಾಡಲಾಗಿದೆ. ಇನ್ನೊಂದೆಡೆ ತುರ್ತು ವಿಚಾರಗಳಿಗೆ ಠಾಣೆಗೆ ಸಂಪರ್ಕ ಮಾಡಲು ಬಂದವರಿಗೂ ಪೊಲೀಸರು ಪ್ರತಿಕ್ರಿಯೆ ನೀಡುತ್ತಿಲ್ಲ. ಸಾರ್ವಜನಿಕ ಆಸ್ತಿಯಾಗಿರೋ ಪೊಲೀಸ್ ಠಾಣೆಗೆ ಸೈಡ್ ವಾಲ್ ಕಟ್ಟೋದೇನಿದೆ..!?, ಯಾರನ್ನ ಮೆಚ್ಚಿಸೋಕೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂಬ ಆಕ್ರೋಶದ ಪ್ರಶ್ನೆಗಳು ಎದ್ದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣ ಸಂಬಂಧ ಇದೀಗ ಪೊಲೀಸರು ಸ್ಯಾಂಡಲ್ವುಡ್ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೋ ಕಾಲ್ಡ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 14 ಮಂದಿಯನ್ನ ಬಂಧಿಸಿದ್ದಾರೆ. ಸದ್ಯ ಆರೋಪಿಗಳೆಲ್ಲರೂ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ಇಂದು ಕೂಡ ಸ್ಥಳ ಮಹಜರು ಪ್ರಕ್ರಿಯೆ ನಡೆಯಲಿದೆ.
Prohibitory orders under Section 144 of CrPC have been imposed for five days around 200-metre radius of the Annapoorneshwari Nagar police station, where actor Darshan and his 12 associates, accused in the murder of Renukaswamy, have been housed.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm