ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am