ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm