ಬ್ರೇಕಿಂಗ್ ನ್ಯೂಸ್
13-06-24 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.13: ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಎನ್.ಎಚ್.ಎಮ್ ಎಂಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಸಿಗುವ ಅನುದಾನವನ್ನು ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
254 public places including bus stands to have namma clinic says health minister Dinesh Gundu Rao.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm