ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
26-02-25 10:43 pm
Bangalore Correspondent
Yellow alert, heatwave threat, Mangalore: ಬಿಸ...
26-02-25 06:14 pm
Minister Ishwara Khandre, Elephant Sanctuary...
25-02-25 10:30 pm
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
26-02-25 10:15 pm
Mangalore Correspondent
Mangaluru-Kabaka Train, Brijesh Chowta: ಮಂಗಳೂ...
26-02-25 03:40 pm
Urwa Police, Mangalore, Selfie, Suspend: ಸೈಬರ...
25-02-25 10:58 pm
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
26-02-25 10:48 pm
HK News Desk
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm