ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm