ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 09:15 pm
Mangalore Correspondent
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm