ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am