ಬ್ರೇಕಿಂಗ್ ನ್ಯೂಸ್
20-06-24 03:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 20: ಕೇಂದ್ರದ ಮೋಟಾರ್ ಆಕ್ಟ್ ಅನ್ವಯ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಹೆಡ್ ಲೈಟ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ಲೈಟ್ ವಾಹನಗಳಿಗೆ ಅಳವಡಿಸುತ್ತಿದ್ದು, ಅದರಿಂದ ಎದುರುಗಡೆಯಿಂದ ಸಂಚರಿಸುವ ಇತರ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್, ಬಸ್ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿರುವುದರಿಂದ ಇತರ ವಾಹನಗಳ ಸವಾರರಿಗೆ ಸಮಸ್ಯೆ ಆಗುತ್ತಿದೆ. ಅಲ್ಲದೆ, ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ ಎಂದಿದ್ದಾರೆ.
ಆದರಿಂದ ಎಲ್ಲ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ನಿಗದಿತ ಹೆಡ್ ಲೈಟ್ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಜೊತೆಗೆ, ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಬೇಕು. ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಅಳವಡಿಸಿರುವುದು ಕಂಡುಬಂದರೆ ಜುಲೈನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ನಿಯಮ ಹೇಳುವುದೇನು?
ಕೇಂದ್ರ ಮೋಟಾರು ವಾಹನ ನಿಯಮಗಳು (ಸಿಎಂವಿಆರ್), ಭಾರತದಲ್ಲಿನ ವಾಹನಗಳಿಗೆ ಕೆಲವು ನಿಬಂಧನೆಗಳನ್ನು ರೂಪಿಸಿದೆ. ಅದರಲ್ಲಿ ಕೆಲವು ಮಾನದಂಡಗಳನ್ನು ಪಾಲಿಸುವ ಎಲ್ಇಡಿ ಹೆಡ್ಲೈಟ್ಗಳ ಬಳಕೆಗೆ ಅವಕಾಶ ನೀಡಲಾಗಿದೆ. ಈ ಎಲ್ಇಡಿ ಹೆಡ್ಲೈಟ್ಗಳು ಆಟೋಮೇಟಿವ್ ಲೈಟಿಂಗ್ಗಾಗಿ ಭಾರತೀಯ ಮಾನದಂಡದಲ್ಲಿ (ಐಎಸ್) ಸೂಚಿಸಿರುವ ನಿರ್ದೇಶನಗಳಿಗೆ ಅನುಗುಣವಾಗಿ ಇರಬೇಕು. ಸಿಎಂವಿಆರ್ನ ನಿಯಮಗಳಿಗೆ ಪೂರಕವಾಗಿ ಸೂಕ್ತ ಲೆನ್ಸ್ಗಳನ್ನು ಎಲ್ಇಡಿ ದೀಪಗಳಿಗೆ ಅಳವಡಿಸಬೇಕು. ಎಲ್ಇಡಿ ಹೆಡ್ಲೈಟ್ಗಳು ರಸ್ತೆಯ ಇನ್ನೊಂದು ದಿಕ್ಕಿನಿಂದ ಬರುವ ವಾಹನ ಸವಾರರಿಗೆ ತೊಂದರೆ ಉಂಟುಮಾಡುವಂತೆ ಇರಬಾರದು. ಎಲ್ಇಡಿ ಹೆಡ್ಲೈಟ್ಗಳನ್ನು ಸೂಕ್ತ ರೀತಿಯಲ್ಲಿ ಅಳವಡಿಸಿರಬೇಕು ಎಂದು ನಿಯಮಗಳು ಹೇಳುತ್ತವೆ. ಈ ನಿಯಮಗಳನ್ನು ಕೂಡ ಅಲೋಕ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Police have announced a special statewide drive in July, targeting motorists who violate regulations by installing glaring and dazzling LEDs for headlights of their vehicles. ADGP (traffic and road safety) Alok Kumar has issued a memo to enforcement authorities, stating that “cases will be booked against motorists under Indian Motor Vehicles Act for violating the rule”.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm