ಬ್ರೇಕಿಂಗ್ ನ್ಯೂಸ್
26-07-20 09:00 am ಕರ್ನಾಟಕ
ಬೆಂಗಳೂರು(ಜುಲೈ 26): ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗಿದೆ. ಸಿಎಂ ಸೇರಿ ಸಚಿವರು ಎಷ್ಟರಮಟ್ಟಿಗೆ ಜವಾಬ್ದಾರಿ ನಿಭಾಯಿಸಿದ್ಧಾರೆ ಎಂಬುದು ಪ್ರಶ್ನೆ. ಸರಳಗೊಳಿಸುವ ಉದ್ದೇಶದಿಂದ ಸಂಪುಟದಲ್ಲಿ ಮೂಲ ಬಿಜೆಪಿಗರು ಮತ್ತು ವಲಸಿಗರೆಂದು ವಿಭಜಿಸಿ ಇಲ್ಲಿ ಪ್ರತ್ಯೇಕವಾಗಿ ವಿಶ್ಲೇಷಣೆ ಮಾಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್ ಅಶೋಕ್, ಬೃಹತ್ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್, ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರ ಕಾರ್ಯಸಾಧನೆಗಳನ್ನ ವಿಶ್ಲೇಷಿಸಲಾಗಿದೆ.
ಪ್ರಮುಖ ಬೆಳವಣಿಗೆಗಳು:
* ಔರಾದ್ಕರ್ ವರದಿ ಜಾರಿಯಿಂದ ಹೊಸದಾಗಿ ನೇಮಕವಾಗುವ ಪೊಲೀಸ್ ಸಿಬ್ಬಂದಿಗೆ ಅನುಕೂಲ
* ಕೋವಿಡ್ ವೇಳೆ ಪಾದರಾಯನಪುರ ಗಲಾಟೆ
* ವರ್ಷದ ಆರು ತಿಂಗಳು ಲಾಕ್ ಡೌನ್ ಬಂದೋಬಸ್ತ್ ನಲ್ಲೇ ಕಳೆಯಿತು ಸಮಯ
* ಮೈತ್ರಿ ಸರ್ಕಾರದಲ್ಲಿ ನೇಮಕವಾಗಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕಕುಮಾರ ಸ್ಥಾನಕ್ಕೆ ಭಾಸ್ಕರ್ ರಾವ್ ನೇಮಕ* ಲಾಕ್ ಡೌನ್ ವೇಳೆ ಹೆಚ್ಚು ಸವಾಲಾಗಿದ್ದ ಬಂದೋಬಸ್ತ್ ವ್ಯವಸ್ಥೆಯನ್ನು ಸೂಕ್ತವಾಗಿ ನಿಭಾಯಿಸಿದ್ದು ಹೆಚ್ಚುಗಾರಿಕೆ
* ಟಾಸ್ಕ್ ಪೋರ್ಸ್ ಸಭೆಯಲ್ಲಿ ಡಿಸಿಎಂ ಅಶ್ವಥನಾರಾಯಣ ಜೊತೆ ಮಾತಿನ ಚಕಮಕಿ ವೇಳೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕಣ್ಣೀರು ಹಾಕಿದ್ದು
* ಇಲಾಖೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ
ಮೈನಸ್ ಪಾಯಿಂಟ್ಸ್:
* ಔರಾದ್ಕರ್ ವರದಿ ಜಾರಿಯಿಂದ ಸೇವೆಯಲ್ಲಿರೋ ಪೊಲೀಸ್ ಸಿಬ್ಬಂದಿಗೆ ಅನ್ಯಾಯ
* ಕಾನೂನು ಸುವವ್ಯಸ್ಥೆ ಕಾಪಾಡುವಲ್ಲಿ ವಿಫಲ
* ಗೃಹ ಸಚಿವರಿಗೆ ಇಲಾಖೆಗೆ ಬೇಕಾದ ಗತ್ತು ಇಲ್ಲ ಅನ್ನೋ ಆರೋಪ
* ಕೊರೋನಾ ವೇಳೆ ಪಾದರಾಯನಪುರ ಗಲಾಟೆ ನಿಭಾಯಿಸುವಲ್ಲಿ ಗೊಂದಲ ಮೂಡಿಸಿದ್ದು
* ಗಲಭೆಕೋರರನ್ನ ಎಲ್ಲಿ ಇಡಬೇಕು ಅನ್ನೋ ವಿಚಾರದಲ್ಲಿ ಸಾಕಷ್ಟು ಗೊಂದಲ (ರಾಮನಗರ ಜೈಲಿನಲ್ಲಿ ಇಟ್ಟ ಘಟನೆ)
* ಖಾತೆಯನ್ನ ಸ್ವತಂತ್ರವಾಗಿ ನಿಭಾಯಿಸುವಲ್ಲಿ ಸಚಿವರು ವಿಫಲ
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ (ಸುರೇಶಕುಮಾರ್) ಮತ್ತು ಉನ್ನತ ಶಿಕ್ಷಣ (ಡಿಸಿಎಂ ಅಶ್ವತ್ಥ ನಾರಾಯಣ) ಇಲಾಖೆಗಳ ಸಾಧನೆಗಳು:
ಸಾಧನೆಗಳು:
* ಕೋವಿಡ್ ಸಮಯದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸಕ್ಸಸ್ ಆಗಿ ನಡೆಸಿದ್ದು ಗರಿಮೆ
* ತಾಂತ್ರಿಕ ಹಾಗೂ ಮೆಡಿಕಲ್ ಫೈನಲ್ ಪದವಿ ಪರೀಕ್ಷೆ ಯಶಸ್ವಿಯಾಗಿ ನಡೆಸಿದ್ದು
* ಸರ್ಕಾರಿ ಕನ್ನಡ ಶಾಲೆಗಳಿಗೆ ಉತ್ತೇಜನ
* SSLC ಮತ್ತು PUC ಯಲ್ಲಿ ಉತ್ತಮ ಫಲಿತಾಂಶ ದೊಡ್ಡ ಸಾಧನೆ
* ಶಾಸಕರ ಅನುದಾನದಲ್ಲಿ ಮೂರು ಶಾಲೆಗಳನ್ನ ದತ್ತು ಪಡೆದು ಅಭಿವೃದ್ಧಿ ಪಡಿಸುವ ಯೋಜನೆ
ನೆಗೆಟಿವ್ ಪಾಯಿಂಟ್ಸ್:
* ಇದೂವರೆಗೂ ಜಾರಿಯಾಗದ ಶಾಸಕರ ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿ ಕಾರ್ಯಕ್ರಮ
* ಆನ್ ಲೈನ್ ತರಗತಿ ವಿಚಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಮಣಿದ ಸರ್ಕಾರ ಅನ್ನೋ ಆರೋಪ ಕೇಳಿ ಬಂದಿತ್ತು
* ಶಾಲಾ ಆರಂಭದ ಬಗ್ಗೆ ಬಗೆಹರಿಯದ ಗೊಂದಲ
* ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ ಪಠ್ಯವನ್ನ ತೆಗೆದು ಹಾಕಬೇಕನ್ನುವ ವಿಚಾರ ವಿವಾದ ಸೃಷ್ಟಿಸಿತ್ತು
* ಇಂಜಿನಿಯರಿಂಗ್ ಪೂರೈಸಿದ ವಿದ್ಯಾರ್ಥಿಗಳಿಗೆ ಭವಿಷ್ಯದ ಆತಂಕ, ನಿರುದ್ಯೋಗದ ಭೀತಿ
* ಐಟಿ, ಬಿಟಿ ಸಚಿವರು, ಉನ್ನತ ಶಿಕ್ಷಣ ಸಚಿವರೂ ಒಬ್ಬರೆ ಆದ್ರೆ, ಎರಡು ಇಲಾಖೆಲಿ ಸಮನ್ವಯತೆ ತಂದು ಉದ್ಯೋಗ ಸೃಷ್ಟಿಯಲ್ಲಿ ವೈಫಲ್ಯ.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm