ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm