ಬ್ರೇಕಿಂಗ್ ನ್ಯೂಸ್
25-06-24 01:08 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 25: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮಹತ್ವದ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂ. ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಜೂನ್ 26ರಿಂದಲೇ ಈ ದರ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಇದೇ ಟೋನ್ಡ್ ಲೀಟರ್ ಹಾಲಿನ ಬೆಲೆ 44 ರೂ. ಆಗಲಿದೆ. ಎಲ್ಲ ಪ್ಯಾಕೆಟ್ ಗಳಲ್ಲೂ 50 ಎಂಎಲ್ ಹೆಚ್ಚುವರಿ ಹಾಲು ಸಿಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ ಎಂದು ತಿಳಿಸಿದ ಭೀಮಾ ನಾಯ್ಕ್, ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ., ಮಹಾರಾಷ್ಟ್ರದಲ್ಲಿ 56 ರೂ., ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ದರ ಏರಿಕೆಯನ್ನು ಸಮರ್ಥಿಸಿದರು. ಇತ್ತೀಚಿಗಷ್ಟೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದ ರಾಜ್ಯ ಸರ್ಕಾರ ಇದೀಗ, ಹಾಲಿನ ದರ ಏರಿಸಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಯಾವುದಕ್ಕೆ ಎಷ್ಟು ಏರಿಕೆ ನೋಡಿ..
ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 44 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 45 ರೂ.
ಹೋಮೋಜಿನೈಸ್ಡ್ ಹಸುವಿನ ಹಾಲು
550 ಎಂಎಲ್ – 26 ರೂ.
1050 ಎಂಎಲ್ – 48 ರೂ.
ಸ್ಪೆಷಲ್ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಸಮೃದ್ಧಿ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 53 ರೂ.
ಹೋಮೋಜಿನೈಸ್ಡ್ ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 51 ರೂ.
ಸತೃಪ್ತಿ ಹಾಲು
550 ಎಂಎಲ್ – 30 ರೂ.
1050 ಎಂಎಲ್ – 57 ರೂ.
ಶುಭಂ ಗೋಲ್ಡ್ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 51 ರೂ.
ಡಬಲ್ ಟೋನ್ಡ್ ಹಾಲು
550 ಎಂಎಲ್ – 23 ರೂ.
1050 ಎಂಎಲ್ – 43 ರೂ.
Close on the heels of the Karnataka government increasing the prices of petrol and diesel, the Karnataka Milk Federation (KMF) has decided to hike the price of milk by ₹2 a litre. The announcement came from KMF Chairman Bhima Naik at a press conference convened in Bengaluru on Tuesday, June 25.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm