ಬ್ರೇಕಿಂಗ್ ನ್ಯೂಸ್
26-06-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿಗಳು 700ಕ್ಕೂ ಹೆಚ್ಚು ಖಾತೆಗಳಿಗೆ 94 ಕೋಟಿ ಹಣವನ್ನು ವರ್ಗಾವಣೆ ಮಾಡಿ, ಡ್ರಾ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಬಂಧಿತರಾಗಿರುವ ಸತ್ಯನಾರಾಯಣ ಶರ್ಮಾ ಮತ್ತು ಸಾಯಿತೇಜ್ ಅವರನ್ನು ತನಿಖೆ ನಡೆಸಿದಾಗ, ಹಣವನ್ನು ಬಳ್ಳಾರಿ, ಬೆಂಗಳೂರು ಭಾಗದ ನೂರಾರು ಮಂದಿಯ ಖಾತೆಗಳಿಗೆ ರವಾನಿಸಿರುವ ಮಾಹಿತಿ ನೀಡಿದ್ದಾರೆ.
ಹೈದರಾಬಾದಿನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಪರೇಟಿವ್ ಎನ್ನುವ ಸಹಕಾರಿ ಸಂಸ್ಥೆಗೆ ವಾಲ್ಮೀಕಿ ನಿಗಮದ 94.73 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ಸಹಕರಿಸಿದ್ದ ಸತ್ಯನಾರಾಯಣ ಶರ್ಮಾ ಹಾಗೂ ದಾವಣಗೆರೆಯ ಚನ್ನಗಿರಿ ಮೂಲದ ಸಾಯಿತೇಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಅವರಿಂದ 14 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. 94 ಕೋಟಿ ಪೈಕಿ 5 ಕೋಟಿಯನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸ್ ಮಾಡಲಾಗಿತ್ತು. ಉಳಿದ 89 ಕೋಟಿ ಮೊತ್ತವನ್ನು 700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿಯಿದೆ. ಆ ಖಾತೆಗಳಿಗೆ ಹಣ ರವಾನಿಸಿದ್ದು ಯಾರು, ಹಣವನ್ನು ಡ್ರಾ ಮಾಡಿ ಯಾರಿಗೆ ತಲುಪಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಸೇರಿದಂತೆ ಹಲವಾರು ಮಂದಿಯ ಖಾತೆಗಳಿಗೆ 5 ಲಕ್ಷದಿಂದ 2 ಕೋಟಿ ವರೆಗೂ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಡ್ರಾ ಮಾಡುವುದು, ಹಣವನ್ನು ಪೂರೈಕೆ ಮಾಡುವುದರ ಹಿಂದೆ ಶರ್ಮಾ ಮತ್ತು ಸಾಯಿತೇಜ್ ಕೈವಾಡ ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
The SIT officers investigating the Valmiki Development Corporation scam found that the accused had transferred and withdrawn Rs 94 crore to more than 700 accounts.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am