ಬ್ರೇಕಿಂಗ್ ನ್ಯೂಸ್
26-06-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿಗಳು 700ಕ್ಕೂ ಹೆಚ್ಚು ಖಾತೆಗಳಿಗೆ 94 ಕೋಟಿ ಹಣವನ್ನು ವರ್ಗಾವಣೆ ಮಾಡಿ, ಡ್ರಾ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಬಂಧಿತರಾಗಿರುವ ಸತ್ಯನಾರಾಯಣ ಶರ್ಮಾ ಮತ್ತು ಸಾಯಿತೇಜ್ ಅವರನ್ನು ತನಿಖೆ ನಡೆಸಿದಾಗ, ಹಣವನ್ನು ಬಳ್ಳಾರಿ, ಬೆಂಗಳೂರು ಭಾಗದ ನೂರಾರು ಮಂದಿಯ ಖಾತೆಗಳಿಗೆ ರವಾನಿಸಿರುವ ಮಾಹಿತಿ ನೀಡಿದ್ದಾರೆ.
ಹೈದರಾಬಾದಿನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಪರೇಟಿವ್ ಎನ್ನುವ ಸಹಕಾರಿ ಸಂಸ್ಥೆಗೆ ವಾಲ್ಮೀಕಿ ನಿಗಮದ 94.73 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ಸಹಕರಿಸಿದ್ದ ಸತ್ಯನಾರಾಯಣ ಶರ್ಮಾ ಹಾಗೂ ದಾವಣಗೆರೆಯ ಚನ್ನಗಿರಿ ಮೂಲದ ಸಾಯಿತೇಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಅವರಿಂದ 14 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. 94 ಕೋಟಿ ಪೈಕಿ 5 ಕೋಟಿಯನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸ್ ಮಾಡಲಾಗಿತ್ತು. ಉಳಿದ 89 ಕೋಟಿ ಮೊತ್ತವನ್ನು 700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿಯಿದೆ. ಆ ಖಾತೆಗಳಿಗೆ ಹಣ ರವಾನಿಸಿದ್ದು ಯಾರು, ಹಣವನ್ನು ಡ್ರಾ ಮಾಡಿ ಯಾರಿಗೆ ತಲುಪಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಸೇರಿದಂತೆ ಹಲವಾರು ಮಂದಿಯ ಖಾತೆಗಳಿಗೆ 5 ಲಕ್ಷದಿಂದ 2 ಕೋಟಿ ವರೆಗೂ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಡ್ರಾ ಮಾಡುವುದು, ಹಣವನ್ನು ಪೂರೈಕೆ ಮಾಡುವುದರ ಹಿಂದೆ ಶರ್ಮಾ ಮತ್ತು ಸಾಯಿತೇಜ್ ಕೈವಾಡ ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
The SIT officers investigating the Valmiki Development Corporation scam found that the accused had transferred and withdrawn Rs 94 crore to more than 700 accounts.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm