ಬ್ರೇಕಿಂಗ್ ನ್ಯೂಸ್
28-06-24 07:06 pm HK News Desk ಕರ್ನಾಟಕ
ಬೆಳಗಾವಿ, ಜೂ 28: ಹಣಕ್ಕೆ ಬೇಡಿಕೆಯಿಟ್ಟು ಹೆಸ್ಕಾಂ ಅಧಿಕಾರಿ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಆರೋಪದ ಮೇಲೆ ದೂರುದಾರೆ ಸೇರಿದಂತೆ 13 ಮಂದಿಗೆ ಆರೋಪಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 86 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿರುವ ಮಹಿಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
2014ರ ನವೆಂಬರ್ 19ರಂದು ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಮಹಿಳೆಯೊಬ್ಬರು ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಅತ್ಯಾಚಾರ, ಜೀವ ಬೆದರಿಕೆ ಹಾಕಿದ್ದು ಸುಳ್ಳು ಎಂದು ತನಿಖೆಯಲ್ಲಿ ಬಯಲಾಗಿತ್ತು. ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಿಂದ ಪ್ರಭಾವಿತಳಾಗಿ ಸುಳ್ಳು ದೂರು ದಾಖಲಿಸಿದ್ದಾಗಿ ಸಿಂಧು ತಪ್ಪೊಪ್ಪಿಕೊಂಡಿದ್ದಳು.
2017ರಲ್ಲಿ ದೂರುದಾರೆ ಸಿಂಧು ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತುಕಾರಾಮ್ ಮಜ್ಜಿಗೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಏಳು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, ತಲಾ 86 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಮೂರ್ತಿ ಆದೇಶ ಹೊರಡಿಸಿದ್ದಾರೆ.
The principal district and sessions court of Belagavi on Thursday sentenced 13 people to imprisonment in a case of false rape accusations against their superior officer at the local Hescom office. The court sentenced them, including a woman - the main accused - to three years and six months of imprisonment and fined them Rs 86,000 each. The district and session court judge L Vijayalakshmi Devi pronounced the verdict on Thursday.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm