ಬ್ರೇಕಿಂಗ್ ನ್ಯೂಸ್
30-06-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTCಯು ಭರ್ಜರಿ ಉದ್ಯೋಗ ನೇಮಕಾತಿ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಬೇಕು.
ಇದರ ನೇಮಕಾತಿಗೆ ನಿರ್ಧರಿಸಿರುವ ಸಾರಿಗೆ ಇಲಾಖೆ ಶೀಘ್ರವೇ ಭರ್ತಿ ಮಾಡಿಕೊಳ್ಳಲಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸುತ್ತಲೇ ಇದ್ದಾರೆ. ಆದರೆ ಅರ್ಹ ಅಭ್ಯರ್ಥಿಗಳು ಯಾವಾಗ ಇದೆಲ್ಲ ನೇಮಕಾತಿ ನಡೆಯಲಿದೆ ಎಂದು ಕಾತರರಾಗಿದ್ದಾರೆ.
ಸದ್ಯ ಖಾಲಿ ಇರುವ ಕೆಎಸ್ಆರ್ಟಿಸಿ ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿವೆ. ಹಾಗಾದರೆ ಎಲ್ಲೆಲ್ಲಿ KSRTC ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಕೆಎಸ್ಆರ್ಟಿಸಿ
ಹುದ್ದೆ ಹೆಸರು: ಚಾಲಕ ಹುದ್ದೆಗಳು (ಹೊರಗುತ್ತಿಗೆ ಆಧಾರದಲ್ಲಿ)
ಒಟ್ಟು ಹುದ್ದೆ: 13000
ಉದ್ಯೋಗ ಸ್ಥಳ: ಬೆಂಗಳೂರು, ರಾಮನಗರ, ಆನೇಕಲ್ ಹಾಗೂ ಇತರ ಕಡೆ
ಮಾಸಿಕ ವೇತನ : 23,700 ರೂ., (PF, ESI ಸೌಲಭ್ಯ ಇರಲಿದೆ)
ಶೈಕ್ಷಣಿಕ ಅರ್ಹತೆಗಳು ಏನು?
ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ
ಮಾನ್ಯತೆ ಪಡೆದ ವಾಹನ ಚಾಲನೆಯ ಪರವಾನಗಿ ಹೊಂದಿರುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ಸೇವಾ ಅನುಭವ, ಷರತ್ತುಗಳು
ಅಭ್ಯರ್ಥಿಗಳು ಲಘು ಮೋಟಾರ್ ವಾಹನ ಚಾಲಕರಾಗಿ ಕನಿಷ್ಠ ಎರಡು ವರ್ಷಗಳ ಕೆಲಸ ಮಾಡಿದ ಅನುಭವ ಇರಬೇಕು. ಹೊರಗುತ್ತಿಗೆ ನೇಮಕಾತಿ ಇದಾಗಿದ್ದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂಬ ಷರತ್ತು ವಿಧಿಸಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ
ಈ ಮೇಲ್ಕಂಡ ಮಾನದಂಡ, ಅರ್ಹತೆ, ಷರತ್ತುಗಳಿಗೆ ಒಪ್ಪಿ ದಾಖಲೆಗಳನ್ನು ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಗಳು ಮಾತ್ರವೇ ಮಾನ್ಯ ಆಗಲಿವೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಜೊತೆ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ನಿಗಮ ಮಾಹಿತಿ ನೀಡಿದೆ.
ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಸಂಪರ್ಕ
ರಾಮನಗರ ಮತ್ತು ಆನೇಕಲ್ KSRTC - 8090980889-8618876846
ಚಾಮರಾಜನಗರ KSRTC - 8050980889- 8618876846 ಇಲ್ಲಿಗೆ ಕರೆ ಮಾಡಿ ನಿಮ್ಮ ಅನುಮಾನಗಳನ್ನು ಬಗೆಹರಿಸಿಕೊಳ್ಳಬೇಕು.
The Karnataka State Road Transport Corporation (KSRTC) has launched a massive recruitment drive. Applications are invited from eligible candidates in this regard. Those who want to get a government job should apply immediately.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:59 pm
Mangalore Correspondent
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm