ಬ್ರೇಕಿಂಗ್ ನ್ಯೂಸ್
01-07-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ.26ರಂದು ನಾಪತ್ತೆ ಆಗಿದ್ದರು.
2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್ಟೇಬಲ್ ಶಿವರಾಜ್ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.
ಮದುವೆಯಾದ ಮೂರೇ ತಿಂಗಳಿಗೆ ಪತಿ-ಪತ್ನಿ ದೂರ ;
ಕೌಟುಂಬಿಕ ಕಾರಣಕ್ಕೆ ಮನನೊಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನವು ಶುರುವಾಗಿದೆ. ಯಾಕೆಂದರೆ ಮೂರು ತಿಂಗಳ ಹಿಂದಷ್ಟೇ ಶಿವರಾಜ್, ವಾಣಿ ಎಂಬಾಕೆಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಬಳಿಕ ಪತಿ-ಪತ್ನಿ ದೂರುವಾಗಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಶಿವರಾಜ್ ಹಾಗು ಕುಟುಂಬದವರ ವಿರುದ್ಧ ವಾಣಿ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೇಲಿಂದ ಮೇಲೆ ಬೆದರಿಕೆ ಹಾಕಿದ್ದಳು. ಕರ್ತವ್ಯಕ್ಕೆ ಹೊರಟ ಶಿವರಾಜ್ ನಾಪತ್ತೆಯಾಗಿದ್ದ, ಪತ್ನಿ ವಾಣಿ ಕಿರುಕುಳದಿಂದ ಬೇಸತ್ತು ಹೋಗಿದ್ದ ಎಂದು ಶಿವರಾಜ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದರು.
ಇದೀಗ ನಾಪತ್ತೆಯಾಗಿದ್ದ ಮಡಿವಾಳ ಠಾಣೆ ಕಾನ್ಸ್ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಶವ ಪತ್ತೆಯಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಳು ಬಾವಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
Bangalore madivala police constable dead body found in well. The deceased has been identified as Shivaraj. He was married just three months ago and is said was leaving separate due to fight between husband and wife.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 01:49 pm
Mangalore Correspondent
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm