ಬ್ರೇಕಿಂಗ್ ನ್ಯೂಸ್
01-07-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ.26ರಂದು ನಾಪತ್ತೆ ಆಗಿದ್ದರು.
2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್ಟೇಬಲ್ ಶಿವರಾಜ್ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.
ಮದುವೆಯಾದ ಮೂರೇ ತಿಂಗಳಿಗೆ ಪತಿ-ಪತ್ನಿ ದೂರ ;
ಕೌಟುಂಬಿಕ ಕಾರಣಕ್ಕೆ ಮನನೊಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನವು ಶುರುವಾಗಿದೆ. ಯಾಕೆಂದರೆ ಮೂರು ತಿಂಗಳ ಹಿಂದಷ್ಟೇ ಶಿವರಾಜ್, ವಾಣಿ ಎಂಬಾಕೆಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಬಳಿಕ ಪತಿ-ಪತ್ನಿ ದೂರುವಾಗಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಶಿವರಾಜ್ ಹಾಗು ಕುಟುಂಬದವರ ವಿರುದ್ಧ ವಾಣಿ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೇಲಿಂದ ಮೇಲೆ ಬೆದರಿಕೆ ಹಾಕಿದ್ದಳು. ಕರ್ತವ್ಯಕ್ಕೆ ಹೊರಟ ಶಿವರಾಜ್ ನಾಪತ್ತೆಯಾಗಿದ್ದ, ಪತ್ನಿ ವಾಣಿ ಕಿರುಕುಳದಿಂದ ಬೇಸತ್ತು ಹೋಗಿದ್ದ ಎಂದು ಶಿವರಾಜ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದರು.
ಇದೀಗ ನಾಪತ್ತೆಯಾಗಿದ್ದ ಮಡಿವಾಳ ಠಾಣೆ ಕಾನ್ಸ್ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಶವ ಪತ್ತೆಯಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಳು ಬಾವಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
Bangalore madivala police constable dead body found in well. The deceased has been identified as Shivaraj. He was married just three months ago and is said was leaving separate due to fight between husband and wife.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am