ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm