ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm