ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.
ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:14 pm
Mangalore Correspondent
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm