ಬ್ರೇಕಿಂಗ್ ನ್ಯೂಸ್
06-12-20 10:19 pm Headline Karnataka News Network ಕರ್ನಾಟಕ
ವಿಜಯಪುರ, ಡಿ.6: ಒಂದೆಡೆ ಕುರುಬ ಸಮುದಾಯಕ್ಕೆ ಎಸ್ಸಿ ಮೀಸಲು ಕರುಣಿಸಲು ದಾಳ ಉರುಳಿಸುತ್ತಿರುವ ರಾಜ್ಯ ಸರಕಾರಕ್ಕೆ ಪಂಚಮ ಸಾಲಿ ಸಂಕಷ್ಟ ಎದುರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಹೋರಾಟಕ್ಕೆ ನಿರ್ಧರಿಸಲಾಗಿದೆ. ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಮುದಾಯ ಮುಖಂಡರು ಉದ್ದೇಶಿಸಿದ್ದು ವಿಜಯಪುರದಿಂದ ಡಿ.23 ರಿಂದ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿ ಪಂಚಮಸಾಲಿ ಸಮುದಾಯದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚಲಕ್ಷ ಹೆಜ್ಜೆಗಳೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.
ಮೀಸಲು ವಿಷಯ ಮುಂದಿಟ್ಟು ಕಳೆದ ಅಕ್ಟೋಬರ್ 28ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬಸವ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸ್ವಾಮೀಜಿಗೆ ಕರೆ ಮಾಡಿದ್ದ ಸಿಎಂ ಯಡಿಯೂರಪ್ಪ, ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಬೇಡಿಕೆ ಈಡೇರದ ಕಾರಣ ಪಂಚಮಸಾಲಿ ಶ್ರೀಗಳು ಪಾದಯಾತ್ರೆಗೆ ಮುಂದಾಗಿದ್ದಾರೆ.
ಸಿಎಂ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿ...
ಇದೇ ವೇಳೆ, ಸಿಎಂ ಬದಲಾವಣೆ ಮಾಡೋದಾದ್ರೆ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಸಿಎಂ ಬದಲಾವಣೆ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಏನೇ ಮಾಡಲಿ, ಯಡಿಯೂರಪ್ಪ ಅವರನ್ನು ಬದಲಿಸುವುದಿದ್ದರೆ ಸಿಎಂ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm