ಬ್ರೇಕಿಂಗ್ ನ್ಯೂಸ್
04-07-24 06:03 pm HK News Desk ಕರ್ನಾಟಕ
ಬೆಂಗಳೂರು, ಜುಲೈ 04: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮಾಡಲಾಗಿತ್ತು. ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್ಪಿಪಿ ಕಡೆಯಿಂದ ರಿಮಾಂಡ್ ಅರ್ಜಿ ಸಲ್ಲಿಸಲಾಗಿತ್ತು. ರಿಮಾಂಡ್ ಅರ್ಜಿ ನೀಡುವಂತೆ ಆರೋಪಿಗಳ ಪರ ವಕೀಲರ ಮನವಿ ಮಾಡಿದ್ದರು. ಆರೋಪಿಗಳ ವಕೀಲರು ಸಹಿ ಮಾಡಿ ರಿಮಾಂಡ್ ಅರ್ಜಿ ಪಡೆಯಲು ನ್ಯಾಯಾಧೀಶರು ಸೂಚನೆ ನೀಡಿದರು.
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9 ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.
The police custody of actor Darshan Thoogudeepa and sixteen other individuals has been extended by a Bengaluru court on Thursday for an additional two weeks till July 18 in connection with the Renukaswamy murder case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm