ಬ್ರೇಕಿಂಗ್ ನ್ಯೂಸ್
10-07-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಗಳು ವಿಚಾರಣೆ ನಡೆಸಿದ್ದಾರೆ.
ನಾಗೇಂದ್ರ ಅವರ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ನಿವಾಸ ಹಾಗೂ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸಕ್ಕೆ ಇ.ಡಿ. ಅಧಿಕಾರಿಗಳು ಬುಧವಾರ ಬೆಳಗ್ಗಿನಿಂದಲೇ ದಾಳಿ ನಡೆಸಿದ್ದು ಅಲ್ಲಿರುವ ಸಿಬಂದಿ, ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಮನೆಯಲ್ಲಿದ್ದ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸೇರಿದ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸ ಹಾಗೂ ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ನಿವಾಸದ ಮೇಲೂ ಏಕಕಾಲದಲ್ಲಿ ಇ.ಡಿ. ಅಧಿಕಾರಿಗಳ ದಾಳಿ ನಡೆದಿದೆ. ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಮಂಗಳವಾರವಷ್ಟೇ ಹಾಜರಾಗಿದ್ದ ದದ್ದಲ್, ವಿಚಾರಣೆ ಎದುರಿಸಿ ಹೋಗಿದ್ದರು. ಅದಾದ ಮರುದಿನವೇ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳವಾರ ನಡೆದಿದ್ದ ಎಸ್ ಐಟಿ ವಿಚಾರಣೆಗೆ ಬಿ. ನಾಗೇಂದ್ರ ಕೂಡ ಹಾಜರಾಗಿದ್ದರು. ಆ ವೇಳೆ, ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ಬಸನಗೌಡ ದದ್ದಲ್ ಗೆ ಮಂಗಳವಾರ ಪ್ರಶ್ನೆಗಳ ಸುರಿಮಳೆಗೈದಿದ್ದರು. ಸತತ 8 ಗಂಟೆ ವಿಚಾರಣೆ ನಡೆಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಪ್ತ ಸಹಾಯಕನ ಆಡಿಯೋ ಆಧಾರದ ಮೇಲೆ ಬಿ.ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗಿನಿಂದ ಸಂಜೆಯ ವರೆಗೂ ಸುದೀರ್ಘ ಸಮಯ ವಿಚಾರಣೆ ನಡೆಸಿದ್ದು ಸಾಕ್ಷ್ಯ ಸಿಕ್ಕಲ್ಲಿ ಅರೆಸ್ಟ್ ಆಗುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದಲ್ಲಿ 194 ಕೋಟಿ ರೂ. ಮೊತ್ತವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿದೆ. ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿರುವುದರಿಂದ ಇಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
Enforcement Directorate (ED) officials on Wednesday morning raided the houses of former Scheduled Tribe Welfare minister B Nagendra and Congress MLA Basanagouda Daddal. The raid came a day after both politicians appeared before the Special Investigation Team (SIT) probing the alleged multi-crore scam at the Karnataka Maharshi Valmiki Scheduled Tribes Development Corporation for questioning. The ED officials visited.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm