ಬ್ರೇಕಿಂಗ್ ನ್ಯೂಸ್
10-07-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಗಳು ವಿಚಾರಣೆ ನಡೆಸಿದ್ದಾರೆ.
ನಾಗೇಂದ್ರ ಅವರ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ನಿವಾಸ ಹಾಗೂ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸಕ್ಕೆ ಇ.ಡಿ. ಅಧಿಕಾರಿಗಳು ಬುಧವಾರ ಬೆಳಗ್ಗಿನಿಂದಲೇ ದಾಳಿ ನಡೆಸಿದ್ದು ಅಲ್ಲಿರುವ ಸಿಬಂದಿ, ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಮನೆಯಲ್ಲಿದ್ದ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸೇರಿದ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸ ಹಾಗೂ ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ನಿವಾಸದ ಮೇಲೂ ಏಕಕಾಲದಲ್ಲಿ ಇ.ಡಿ. ಅಧಿಕಾರಿಗಳ ದಾಳಿ ನಡೆದಿದೆ. ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಮಂಗಳವಾರವಷ್ಟೇ ಹಾಜರಾಗಿದ್ದ ದದ್ದಲ್, ವಿಚಾರಣೆ ಎದುರಿಸಿ ಹೋಗಿದ್ದರು. ಅದಾದ ಮರುದಿನವೇ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳವಾರ ನಡೆದಿದ್ದ ಎಸ್ ಐಟಿ ವಿಚಾರಣೆಗೆ ಬಿ. ನಾಗೇಂದ್ರ ಕೂಡ ಹಾಜರಾಗಿದ್ದರು. ಆ ವೇಳೆ, ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ಬಸನಗೌಡ ದದ್ದಲ್ ಗೆ ಮಂಗಳವಾರ ಪ್ರಶ್ನೆಗಳ ಸುರಿಮಳೆಗೈದಿದ್ದರು. ಸತತ 8 ಗಂಟೆ ವಿಚಾರಣೆ ನಡೆಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಪ್ತ ಸಹಾಯಕನ ಆಡಿಯೋ ಆಧಾರದ ಮೇಲೆ ಬಿ.ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗಿನಿಂದ ಸಂಜೆಯ ವರೆಗೂ ಸುದೀರ್ಘ ಸಮಯ ವಿಚಾರಣೆ ನಡೆಸಿದ್ದು ಸಾಕ್ಷ್ಯ ಸಿಕ್ಕಲ್ಲಿ ಅರೆಸ್ಟ್ ಆಗುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದಲ್ಲಿ 194 ಕೋಟಿ ರೂ. ಮೊತ್ತವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿದೆ. ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿರುವುದರಿಂದ ಇಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
Enforcement Directorate (ED) officials on Wednesday morning raided the houses of former Scheduled Tribe Welfare minister B Nagendra and Congress MLA Basanagouda Daddal. The raid came a day after both politicians appeared before the Special Investigation Team (SIT) probing the alleged multi-crore scam at the Karnataka Maharshi Valmiki Scheduled Tribes Development Corporation for questioning. The ED officials visited.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm