ಬ್ರೇಕಿಂಗ್ ನ್ಯೂಸ್
10-07-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಗಳು ವಿಚಾರಣೆ ನಡೆಸಿದ್ದಾರೆ.
ನಾಗೇಂದ್ರ ಅವರ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ನಿವಾಸ ಹಾಗೂ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸಕ್ಕೆ ಇ.ಡಿ. ಅಧಿಕಾರಿಗಳು ಬುಧವಾರ ಬೆಳಗ್ಗಿನಿಂದಲೇ ದಾಳಿ ನಡೆಸಿದ್ದು ಅಲ್ಲಿರುವ ಸಿಬಂದಿ, ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಮನೆಯಲ್ಲಿದ್ದ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸೇರಿದ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸ ಹಾಗೂ ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ನಿವಾಸದ ಮೇಲೂ ಏಕಕಾಲದಲ್ಲಿ ಇ.ಡಿ. ಅಧಿಕಾರಿಗಳ ದಾಳಿ ನಡೆದಿದೆ. ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಮಂಗಳವಾರವಷ್ಟೇ ಹಾಜರಾಗಿದ್ದ ದದ್ದಲ್, ವಿಚಾರಣೆ ಎದುರಿಸಿ ಹೋಗಿದ್ದರು. ಅದಾದ ಮರುದಿನವೇ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳವಾರ ನಡೆದಿದ್ದ ಎಸ್ ಐಟಿ ವಿಚಾರಣೆಗೆ ಬಿ. ನಾಗೇಂದ್ರ ಕೂಡ ಹಾಜರಾಗಿದ್ದರು. ಆ ವೇಳೆ, ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ಬಸನಗೌಡ ದದ್ದಲ್ ಗೆ ಮಂಗಳವಾರ ಪ್ರಶ್ನೆಗಳ ಸುರಿಮಳೆಗೈದಿದ್ದರು. ಸತತ 8 ಗಂಟೆ ವಿಚಾರಣೆ ನಡೆಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಪ್ತ ಸಹಾಯಕನ ಆಡಿಯೋ ಆಧಾರದ ಮೇಲೆ ಬಿ.ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗಿನಿಂದ ಸಂಜೆಯ ವರೆಗೂ ಸುದೀರ್ಘ ಸಮಯ ವಿಚಾರಣೆ ನಡೆಸಿದ್ದು ಸಾಕ್ಷ್ಯ ಸಿಕ್ಕಲ್ಲಿ ಅರೆಸ್ಟ್ ಆಗುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದಲ್ಲಿ 194 ಕೋಟಿ ರೂ. ಮೊತ್ತವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿದೆ. ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿರುವುದರಿಂದ ಇಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
Enforcement Directorate (ED) officials on Wednesday morning raided the houses of former Scheduled Tribe Welfare minister B Nagendra and Congress MLA Basanagouda Daddal. The raid came a day after both politicians appeared before the Special Investigation Team (SIT) probing the alleged multi-crore scam at the Karnataka Maharshi Valmiki Scheduled Tribes Development Corporation for questioning. The ED officials visited.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm