ಬ್ರೇಕಿಂಗ್ ನ್ಯೂಸ್
12-07-24 10:30 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಶಾಂತಿನಗರದ ಇ.ಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಅವರ ಮನೆಯಿಂದ ಇಡಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು.
ಎಸ್ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ
ಇನ್ನು 'ನನಗೇನೂ ಗೊತ್ತಿಲ್ಲ ...ನಾನು ಯಾರಿಗೂ ಏನೂ ಕೊಟ್ಟಿಲ್ಲ' ಎಂದು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುವ ವೇಳೆ ಮಾಧ್ಯಮಗಳಿಗೆ ಮಾಜಿ ಸಚಿವ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಏನಿದು ಪ್ರಕರಣ ?
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ನ ವಿವಿಧ ಖಾತೆಗಳಿಗೆ 88.62 ಕೋಟಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರಿನ ಮೇಲೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.
The Enforcement Directorate on Friday took former Minister B Nagendra into custody, as part of a money-laundering probe linked to the alleged irregularities in the Karnataka Maharshi Valmiki Scheduled Tribes Development Corporation Limited, official.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm