ಬ್ರೇಕಿಂಗ್ ನ್ಯೂಸ್
12-07-24 10:30 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಶಾಂತಿನಗರದ ಇ.ಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಅವರ ಮನೆಯಿಂದ ಇಡಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು.
ಎಸ್ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ
ಇನ್ನು 'ನನಗೇನೂ ಗೊತ್ತಿಲ್ಲ ...ನಾನು ಯಾರಿಗೂ ಏನೂ ಕೊಟ್ಟಿಲ್ಲ' ಎಂದು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುವ ವೇಳೆ ಮಾಧ್ಯಮಗಳಿಗೆ ಮಾಜಿ ಸಚಿವ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಏನಿದು ಪ್ರಕರಣ ?
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ನ ವಿವಿಧ ಖಾತೆಗಳಿಗೆ 88.62 ಕೋಟಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರಿನ ಮೇಲೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.
The Enforcement Directorate on Friday took former Minister B Nagendra into custody, as part of a money-laundering probe linked to the alleged irregularities in the Karnataka Maharshi Valmiki Scheduled Tribes Development Corporation Limited, official.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm