ಬ್ರೇಕಿಂಗ್ ನ್ಯೂಸ್
12-07-24 05:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಅನ್ನುವ ಆರೋಪದಲ್ಲಿ ಕರ್ನಾಟಕ ಹೈಕೋರ್ಟ್ ಪ್ರಸಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.
ಈ ಸಂಬಂಧ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶದ ವಿರುದ್ಧ ಮೇಲ್ಮನವಿ ಹೋದ ಪವರ್ ಟಿವಿ ವಾಹಿನಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠವು, ಈ ವಿಚಾರದ ಕುರಿತಾಗಿ ನಾವು ಹೆಚ್ಚೇನು ಕೇಳಲು ಬಯಸೋದಿಲ್ಲ. ಸುದ್ದಿ ವಾಹಿನಿಯ ಪ್ರಸಾರ ನಿಲ್ಲಿಸುವುದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟ ಎಂದಿದ್ದಾರೆ. ಸುದ್ದಿ ವಾಹಿನಿಯ ದನಿಯನ್ನು ಉಡುಗಿಸಬೇಕು ಅನ್ನುವ ಉದ್ದೇಶ ಇದರ ಹಿಂದಿದೆ. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹೇರಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.
ಜುಲೈ 9ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸೋದಾಗಿ ಹೇಳಿರುವ ಸುಪ್ರೀಂ ಕೋರ್ಟ್, ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಹೀಗಾಗಿ, ಸ್ಥಗಿತಗೊಂಡಿರುವ ಪವರ್ ಟಿವಿ ಮತ್ತೆ ಕಾರ್ಯ ನಿರ್ವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಪವರ್ ಟಿವಿಯಲ್ಲಿ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸಮಗ್ರ ವರದಿ ಪ್ರಕಟವಾಗಿತ್ತು.
The Supreme Court on Friday granted interim relief to Kannada news channel Power TV and its affiliate Mitcoin Infrastructure by vacating an interim stay on the TV channel's broadcasts.Power TV is a Kannada news channel that had been at the forefront of reporting sexual abuse allegations against suspended Janata Dal (Secular) [JD (s)] leader Prajwal Revanna and his brother, Suraj Revanna.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm