ಬ್ರೇಕಿಂಗ್ ನ್ಯೂಸ್
12-07-24 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕಡೆಗೂ ಬಂಧಿಸಿದ್ದಾರೆ. ಎರಡು ದಿನಗಳಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಎರಡು 2 ದಿನಗಳಿಂದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಮನೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ಮುಂಜಾನೆಯೇ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಒಂದೆಡೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಎರಡು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರೂ ನಾಗೇಂದ್ರ ಅವರ ಬಗ್ಗೆ ಮೃದು ಧೋರಣೆ ತಾಳಿತ್ತು. ಹಗರಣದ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿದ್ದರೂ ವಶಕ್ಕೆ ಪಡೆದಿರಲಿಲ್ಲ. ಪ್ರಕರಣದಲ್ಲಿ 184 ಕೋಟಿ ಅವ್ಯವಹಾರ ಆಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ತನಿಖೆಯ ಸಲುವಾಗಿ ಇಡಿ ತನಿಖೆ ಶುರು ಮಾಡಿದೆ. ಇದೀಗ ಆರೋಪಿಗಳನ್ನು ವಿಚಾರಣೆ ನಡುವಲ್ಲೇ ಬಂಧಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಮುಖ ರಾಜಕಾರಣಿಯೊಬ್ಬರು ಅರೆಸ್ಟ್ ಆಗುತ್ತಲೇ ಈ ಹಗರಣ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರ ಕೊರಳು ಸುತ್ತಿಕೊಳ್ಳುವುದು ಸ್ಪಷ್ಟವಾಗಿದೆ.
Former Karnataka Minister B Nagendra was taken into custody by the Enforcement Directorate (ED) on Friday, July 12 in connection with the alleged irregularities in the Karnataka Maharshi Valmiki Scheduled Tribes Development Corporation Limited, according to reports.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm