ಬ್ರೇಕಿಂಗ್ ನ್ಯೂಸ್
13-07-24 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.13: ಯಲಹಂಕದ RMZ ಗ್ಯಾಲರಿಯಾ ರೆಸಿಡೆನ್ಸಿಸ್ ಅಪಾರ್ಟ್ಮೆಂಟ್ನಲ್ಲಿ ದಾರುಣ ಘಟನೆ ನಡೆದಿದೆ. ಮಗ ಹಾಗೂ ತಾಯಿ ಸತ್ತ 4 ದಿನದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಮಗನನ್ನು ನೇಣು ಬಿಗಿದು ಸಾಯಿಸಿದ ತಾಯಿ ಬಳಿಕ ಬೆಡ್ ಮೇಲೆ ಮಲಗಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಯಲಹಂಕ ಠಾಣಾ ಪೊಲೀಸರು ಅಪಾರ್ಟ್ಮೆಂಟ್ಗೆ ಭೇಟಿ ಕೊಟ್ಟು ಮೃತದೇಹವನ್ನ ಪೋಸ್ಟ್ ಮಾರ್ಟಂಗೆ ಕಳುಹಿಸಿದ್ದಾರೆ. ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ. ಸಜಿತ್ ಅವರು ಈ ದುರಂತದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ.
RMZ ಗ್ಯಾಲರಿಯಾ ರೆಸಿಡೆನ್ಸಿಸ್ ಅಪಾರ್ಟ್ಮೆಂಟ್ನಲ್ಲಿ ತಾಯಿ, ಮಗನ ಮೃತದೇಹ ಪತ್ತೆಯಾಗಿದೆ. ರಮ್ಯಾ ಮೂಲತಃ ಕೋಲಾರದವರು. ಆಂಧ್ರ ಮೂಲದ ಶ್ರೀಧರ್ ಪುಲಿವರ್ತಿ ಅವರನ್ನು ಮದುವೆ ಆಗಿದ್ದರು. ಶ್ರೀಧರ್ ಆಂಧ್ರ ಮೂಲದವರಾಗಿದ್ದಾರೆ. ರಮ್ಯಾ ಅವರ ಗಂಡ 3 ತಿಂಗಳ ಹಿಂದೆ ಸಾವನ್ನಪ್ಪಿದ್ದರು. ಗಂಡನ ಸಾವಿನ ಖಿನ್ನತೆಯಿಂದ ಹೊರ ಬರಲಾರದೆ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. FSL ವರದಿ, ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ಸಾವಿನ ಅಸಲಿ ಕಾರಣ ಗೊತ್ತಾಗಲಿದೆ ಎಂದು ಡಿಸಿಪಿ ವಿ.ಜೆ. ಸಜಿತ್ ಅವರು ತಿಳಿಸಿದ್ದಾರೆ.
ತಾಯಿ, ಮಗನ ಸಾವು ಆಗಿದ್ದು ಹೇಗೆ?
40 ವರ್ಷದ ರಮ್ಯಾ ಅವರು 13 ವರ್ಷದ ಭಾರ್ಗವ್ ಪುಲಿವರ್ತ ಎಂಬ ಮಗನನ್ನು ಮೊದಲಿಗೆ ಕೊಲೆ ಮಾಡಿದ್ದಾರೆ. ಮಗನ ಸಾವಿನ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಶಂಕಿಸಲಾಗಿದೆ.
ರಮ್ಯಾ ಅವರ ಗಂಡ ಶ್ರೀಧರ್ ಪುಲಿವರ್ತ ಅವರು ಕಳೆದ ಮೂರು ತಿಂಗಳ ಹಿಂದೆ ಕ್ಯಾನ್ಸರ್ನಿಂದ ಸಾವನ್ನಪ್ಪಿದ್ದರು. ಇದರಿಂದ ಮಾನಸಿಕ ಖಿನ್ನತೆಯಲ್ಲಿದ್ದ ತಾಯಿ ಮಗನನ್ನು ಕೊಂದು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸತ್ತ 4 ದಿನದ ಬಳಿಕ ಬಯಲು!
ರಮ್ಯಾ ಅವರ 19 ವರ್ಷದ ಮಗಳು ಪಿಜಿಯಲ್ಲಿದ್ದಾಳೆ. ಕಳೆದ ಜುಲೈ 9ನೇ ತಾರೀಖು ರಾತ್ರಿ ಮಗಳ ಜೊತೆ ರಮ್ಯಾ ಮಾತನಾಡಿದ್ದರು. ಅದಾದ ಮೇಲೆ ರಮ್ಯಾ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಮನೆಯಲ್ಲಿ ರಮ್ಯಾ ಅವರು ಮೊದಲು ಮಗನನ್ನು ನೇಣು ಹಾಕಿದ್ದಾರೆ. ಮಗನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿದ್ದಾರೆ. ಆನಂತರ ತಾಯಿ ಕೂಡ ನೇಣಿಗೆ ಶರಣಾಗಿದ್ದಾರೆ. ತಾಯಿ, ಮಗ ಇಬ್ಬರು ಸತ್ತ ನಾಲ್ಕು ದಿನದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.
ತಾಯಿ, ಮಗ ಸಾವಿಗೆ ಕಾರಣವೇನು?
ರಮ್ಯಾ ಅವರು ಶ್ರೀಧರ್ ಎಂಬುವವರನ್ನು ಲವ್ ಮಾಡಿ ಅಂತರ್ಜಾತಿ ವಿವಾಹವಾಗಿದ್ದರು. ಗಂಡನ ಸಾವಿನ ನಂತರ ಇಡೀ ಕುಟುಂಬ ಆರ್ಥಿಕವಾಗಿ ಕುಗ್ಗಿ ಹೋಗಿತ್ತು. ಅಲ್ಲದೇ ಗಂಡ ಸತ್ತ ನಂತರ ತಾವು ಸಾಯುವುದಾಗಿ ರಮ್ಯಾ ಹೇಳಿಕೊಂಡಿದ್ದರಂತೆ.
ರಮ್ಯಾ ಅವರ ಕುಟುಂಬಕ್ಕೆ ಫ್ಲ್ಯಾಟ್ ಬಾಡಿಗೆ 45 ಸಾವಿರ, ಶಾಲೆ ಫೀಸ್, ಮನೆ ನಿರ್ವಹಣೆ ಖರ್ಚು ಅಂತ ತಿಂಗಳಿಗೆ ಲಕ್ಷ, ಲಕ್ಷ ಹಣ ಬೇಕಿತ್ತು. ಹಣ ಹೊಂದಿಸೋದು ರಮ್ಯಾಳಿಗೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದ ರಮ್ಯಾ ಅವರು ಪೊಲೀಸರು, ಡಾಕ್ಟರ್ಗೆ ಮತ್ತು ಮಗಳಿಗೆ ಪತ್ರ ಬರೆದು ನೇಣಿಗೆ ಶರಣಾಗಿದ್ದಾರೆ.
The incident took place at RMZ Galleria Residency Apartments in Yelahanka. The incident came to light four days after the death of his son and mother. According to preliminary investigations, the mother hanged her son to death and later committed suicide by lying on the bed. Yelahanka police visited the apartment and sent the body for post-mortem. DCP (Northeast) V.J. Sajith has given more information about the tragedy.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm