ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm