ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm