ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm