ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm