ಬ್ರೇಕಿಂಗ್ ನ್ಯೂಸ್
19-07-24 10:54 am HK News Desk ಕರ್ನಾಟಕ
ಹಾವೇರಿ, ಜುಲೈ 19: ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವಣೂರಿನ ಮಾದಾಪುರ ಗ್ರಾಮದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಚನ್ನಮ್ಮ(30) ಹಾಗು 2 ವರ್ಷದ ಅವಳಿ ಮಕ್ಕಳಾದ ಅಮೂಲ್ಯ ಮತ್ತು ಅನುಶ್ರೀ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮುತ್ತಪ್ಪ ಮತ್ತು ಅವರ ಪತ್ನಿ ಸುನೀತಾ ಹಾಗೂ ಯಲ್ಲಮ್ಮ(70) ಗಾಯಗೊಂಡಿದ್ದು, ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಯಲ್ಲಮ್ಮ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಮೃತಪಟ್ಟ ಅವಳಿ ಮಕ್ಕಳು ಗಾಯಗೊಂಡಿರುವ ಮುತ್ತಪ್ಪ ಮತ್ತು ಸುನೀತಾ ದಂಪತಿಯ ಪುತ್ರಿಯರಾಗಿದ್ದಾರೆ.
ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಎಸಿ ಮಹಮ್ಮದ್ ಅಜ್ಜೀಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತರ ಸಂಬಂಧಿಕ ವಿರೇಶ್ ಸೊಪ್ಪಿನ ಮಾಹಿತಿ ನೀಡಿ, "ರಾತ್ರಿ 2.30ರ ಸುಮಾರಿಗೆ ಮೇಲ್ಚಾವಣಿ ಕುಸಿದಿದೆ. ಉಸಿರಾಟದ ತೊಂದರೆಯಾಗಿ ಮೂವರು ಸಾವನ್ನಪ್ಪಿದರು. ಸವಣೂರಿನಲ್ಲಿ ಯಾವಾಗಲೂ ಆಂಬ್ಯುಲೆನ್ಸ್ ಸಮಸ್ಯೆ ಇದ್ದದ್ದೇ. ಒಂದು ವೇಳೆ ಇದ್ದರೂ ಸಮಯಕ್ಕೆ ಸರಿಯಾಗಿ ಕಳುಹಿಸುವುದಿಲ್ಲ. ಘಟನೆಯ ತಕ್ಷಣವೇ ಆಂಬ್ಯುಲೆನ್ಸ್ ಬಂದಿದ್ದರೆ ಮೂವರ ಪ್ರಾಣ ಉಳಿಸಬಹುದಿತ್ತು" ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಗುಡ್ಡ, ರಸ್ತೆ ಕುಸಿತ ಸಂಭವಿಸಿ ಸಾವು-ನೋವು ವರದಿಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ್ದು ಹಲವರು ಕಣ್ಮರೆಯಾಗಿದ್ದಾರೆ. ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಮಾಡುತ್ತಿದ್ದಂತೆ ಮತ್ತೆ ಮತ್ತೆ ಗುಡ್ಡ ಕುಸಿಯುತ್ತಿದೆ.
ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನದಿ ಪಾತ್ರದ ಜನರ ಮನೆಗಳು ಕುರುಹೇ ಇಲ್ಲದಂತೆ ನೀರಿನೊಂದಿಗೆ ಕೊಚ್ಚಿ ಹೋಗಿವೆ. ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಸೇತುವೆಗಳು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೆರೆ ಸಂತ್ರಸ್ತರಿಗೆ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತಿದೆ.
Heavy rain in Haveri, three including two twins killed after house collapsed. Three others have got injuries had have been admitted in the hospital.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm