ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm