ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am