ಬ್ರೇಕಿಂಗ್ ನ್ಯೂಸ್
20-07-24 10:25 pm Mangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ಕನ್ನಡ ಕಿರುತೆರೆಯಲ್ಲಿ ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿದ್ದ ಜನಪ್ರಿಯ ನಿರ್ದೇಶಕ ವಿನೋದ್ ದೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ನಾಗರಬಾವಿಯ ತಮ್ಮ ನಿವಾಸದಲ್ಲಿ ವಿನೋದ್ ದೋಂಡಾಲೆ ನೇಣಿಗೆ ಕೊರಳೊಡ್ಡಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿಟ್ ಸೀರಿಯಲ್ ‘ಕರಿಮಣಿ’ ಗೆ ಆಕ್ಷನ್ ಕಟ್ ಹೇಳುತ್ತಿದ್ದವರು ವಿನೋದ್ ದೋಂಡಾಲೆ. ‘ಕರಿಮಣಿ’ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿತ್ತು.ಇದರ ಜೊತೆ ಜೊತೆಗೇ ನೀನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಚಿತ್ರಕ್ಕೂ ನಿರ್ದೇಶನ ಮಾಡುತ್ತಿದ್ದರು. ‘ಅಶೋಕ ಬ್ಲೇಡ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಬಾಕಿ ಇತ್ತು. ಸ್ವಂತ ಬ್ಯಾನರಿನಡಿ ಚಿತ್ರ ನಿರ್ಮಿಸುತ್ತಿದ್ದ ವಿನೋದ್ ದೋಂಡಾಲೆ ಹಠಾತ್ ಆತ್ಮಹತ್ಯೆ ಮಾಡಿಕೊಂಡಿರುವುದು ಕನ್ನಡ ಸಿನಿಮಾ ಜಗತ್ತಿನಲ್ಲಿ ಆಘಾತ ಮೂಡಿಸಿದೆ.
ಸಿನಿಮಾ ನಿರ್ಮಾಣ ತೊಡಗಿಸಿಕೊಂಡ ಬಳಿಕ ಆರ್ಥಿಕವಾಗಿ ವಿನೋದ್ ಸಂಕಷ್ಟಕ್ಕೆ ಸಿಲುಕಿದ್ದರು. ಅಶೋಕ ಬ್ಲೇಡ್ ಚಿತ್ರಕ್ಕಾಗಿ ಸಾಕಷ್ಟು ಸಾಲ ಮಾಡಿದ್ದು ಅದೇ ಹೊರೆಯಿಂದಾಗಿಯೇ ವಿನೋದ್ ದೋಂಡಾಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಟಿಎನ್ ಸೀತಾರಾಮ್ ಜೊತೆಗೆ ಮುಕ್ತ ಧಾರಾವಾಹಿ ತಂಡದಲ್ಲಿ ಕೆಲಸ ಮಾಡಿದ್ದ ಹತ್ತು ವರ್ಷಗಳಲ್ಲಿ ತನ್ನದೇ ನಿರ್ಮಾಣದ ಸೀರಿಯಲ್ ಮಾಡುತ್ತಿದ್ದರು. ಜೊತೆಗೆ, ನಿರ್ದೇಶನವನ್ನೂ ಮಾಡುತ್ತಿದ್ದರು. ಕಲರ್ಸ್ ಮತ್ತು ಉದಯ ಟಿವಿಯಲ್ಲಿ ಇವರ ಸೀರಿಯಲ್ ಪ್ರಸಾರವಾಗುತ್ತಿತ್ತು.
ಸಾವಿನ ಬಗ್ಗೆ ಕುಸುಮಾ ಆಯರಹಳ್ಳಿ ಬರಹ
"ವಿನೋದ್ ದೋಂಡಾಳೆ ಎಂಬ ನಿರ್ದೇಶಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣ; ಅವರದೇ ಸಿನೆಮಾ. 'ಅಶೋಕ ಬ್ಲೇಡ್' ಅಂತ ಹೆಸರಿಟ್ಟಿದ್ದರು. ಅದು ಬದುಕನ್ನು ಕುಯ್ದು ಕೊಂದಿತು. ಪಿ ಶೇಷಾದ್ರಿ ಅವರ ಜೊತೆ 8 ವರ್ಷ ಸಿನೆಮಾ, ಧಾರಾವಾಹಿಗಳನ್ನು ಮಾಡಿ ನಂತರ ಮುಕ್ತ ದಾರಾವಾಹಿಗೆ ಟಿ ಎನ್ ಸೀತಾರಾಮ್ ಸರ್ ಜೊತೆಯಾದವರು ವಿನೋದ್. ಅಲ್ಲಿಂದ ನರಹರಿ ರಾವ್, ದೀಪಕ್ ಮತ್ತು ವಿನೋದ್ ತಮ್ಮದೇ ಪ್ರೊಡಕ್ಷನ್ ಹೌಸ್ ಕಟ್ಟಿದರು. ಒಬ್ಬ ಕೆಮರಾಮನ್, ಒಬ್ಬ ನಿರ್ದೇಶಕ ಮತ್ತೊಬ್ಬ ಪ್ರೊಡಕ್ಷನ್ ಮ್ಯಾನೇಜರ್. ಈ ಕಾಂಬಿನೇಶನ್ ವರ್ಕಾಗುವಾಗ ದೀಪಕ್ ಇಲ್ಲವಾದರು. ವಿನೋದ್ ಮತ್ತು ನರಹರಿ ಮುಂದುವರೆದರು. ಯಶಸ್ವೀ ಧಾರಾವಾಹಿಗಳನ್ನು ನೀಡಿದರು. ಟಿಸಿಲೊಡೆದು, ಛಲ ಬಿಡದೆ ಅವರು ಮುಂದುವರೆಯುವಾಗ ಎಲ್ಲರಿಗೂ ಖುಷಿಯಾಗಿತ್ತು’’
ಯಾವುದೋ ಧಾರಾವಾಹಿ ಮಾಡುವ ಬಗ್ಗೆ ಕೆಲವ ತಿಂಗಳ ಹಿಂದೆ ಮಾತಾಡಿದಾಗ, ಈ ಸಿನೆಮಾ ಮುಗಿಯಲಿ ಅಂದಿದ್ದರು. ಧಾರಾವಾಹಿಯ ಮೂಲಕ ಸ್ವಂತ ಸಿನೆಮಾ ಮಾಡುವಷ್ಟು ಬೆಳೆದರಲ್ಲಾ ಅಂತ ಬಹಳ ಖುಷಿಯಾಗಿತ್ತು. ಬಹುಶಃ ಧಾರಾವಾಹಿಯೇ ಮಾಡಿಕೊಂಡಿದ್ದರೆ ಎಲ್ಲವೂ ಚೆನ್ನಾಗೇ ಇರುತ್ತಿತ್ತೇನೋ. ಆದರೆ.. ಸಿನೆಮಾ ಕನಸು ಅಂತೊಂದಿದೆಯಲ್ಲಾ.. ಅದು ಎಲ್ಲರ ಪಾಲಿಗೂ ನನಸಾಗುವ ಸವಿಗನಸೇ ಅಲ್ಲ, ದುಃಸ್ವಪ್ನವೂ ಆಗಬಹುದು. ಅದಕ್ಕೆ ವಿನೋದ್ ಸರ್ ಸಾವು ಉದಾಹರಣೆಯಾಗಬಾರದಿತ್ತು’’
‘’ನೀನಾಸಂ ಸತೀಶ್ ನಾಯಕರಾಗಿ, ಮುಕ್ಕಾಲು ಮುಗಿದಿದ್ದ ಸಿನೆಮಾ ಇನ್ನೂ ಕೊಡು, ಮತ್ತೂ ಕೊಡು ಅಂತ ಕೋಟಿಗಳನ್ನು ಕೇಳುತ್ತಲೇ ಇತ್ತು. 'ಅಶೋಕ ಬ್ಲೇಡ್' ಸಾಲಗಾರರ ರೂಪದಲ್ಲಿ ದಿನವೂ ಎದೆ ಇರಿಯುತ್ತಿತ್ತು. ಇಂದು ಎಲ್ಲವೂ ಮುಗಿಯಿತು!’’ ಹೀಗೆಂದು ಕುಸುಮಾ ತನ್ನ ಫೇಸ್ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
The Kannada television and film industry has been facing one shock after another. Following the deaths, controversies, and divorces of several actors, the industry is now reeling from the suicide of a director.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm