ಬ್ರೇಕಿಂಗ್ ನ್ಯೂಸ್
22-07-24 10:21 pm HK News Desk ಕರ್ನಾಟಕ
ಮೈಸೂರು, ಜುಲೈ 22: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವುದು ನಾನೂರು, ಐನೂರು ಕೋಟಿ ರೂಪಾಯಿ ಹಗರಣ ಆಲ್ಲ. ಕನಿಷ್ಠ ಮೂರ್ನಾಲ್ಕು ಸಾವಿರ ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಮುಡಾ ಹಗರಣ ವಿಚಾರವಾಗಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮುಡಾ ಹಗರಣ ಕುರಿತು ಸಂಪೂರ್ಣ ತನಿಖೆ ಮಾಡಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮನಸ್ಥಿತಿ ಸಿದ್ದರಾಮಯ್ಯ ಅವರಿಗೆ ಇಲ್ಲ" ಎಂದು ಹೇಳಿದರು.
"ಸಿಎಂ ಸಿದ್ದರಾಮಯ್ಯ ಸಾಹೇಬ್ರ ಬಗ್ಗೆ ಸೈದ್ಧಾಂತಿಕವಾಗಿ ವಿರೋಧ ಅಷ್ಟೇ. ಅಭಿವೃದ್ಧಿ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಸಿಎಂ ತಮಗೆ ಬಂದ ಸೈಟ್ ಗಳನ್ನ ವಾಪಸ್ ಕೊಟ್ಟು ತನಿಖೆ ಮಾಡಿಸುತ್ತಾರೆ ಎಂದು ನಾನು ನಂಬಿದೆ. ಆದರೆ ಆ ರೀತಿ ಮಾಡದೆ 62 ಕೋಟಿ ಪರಿಹಾರ ಕೇಳಿದ್ದಾರೆ. ಇದು ನನಗೆ ಸಿಎಂ ಬಗ್ಗೆ ದೊಡ್ಡ ಮಟ್ಟದ ನಿರಾಸೆ ಉಂಟು ಮಾಡಿದೆ. ಸಿಎಂ ಮೇಲೆ ಇದ್ದ ಅಭಿಮಾನವೂ ಕೂಡ ಈ ಪ್ರಕರಣದಿಂದ ಕಡಿಮೆಯಾಗಿದೆ" ಎಂದರು.
"2019 ರಲ್ಲಿ ವಿ. ಸೋಮಣ್ಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ 7,500 ಮುಡಾ ಖಾಲಿ ನಿವೇಶನಗಳ ಹರಾಜಿಗೆ ಮುಂದಾಗಿದ್ದರು. ಅಷ್ಟರಲ್ಲೇ ಅವರಿಗೆ ಗೇಟ್ ಪಾಸ್ ಸಿಕ್ಕಿತ್ತು. ಮುಡಾ ಆಯುಕ್ತರಾದ ಕಾಂತರಾಜ್ ಅವರಿಗೂ ಗೇಟ್ ಪಾಸ್ ಸಿಕ್ಕತ್ತು. ಇದು ಮುಡಾದ ವ್ಯವಸ್ಥೆ. ಆದರೆ ಸಿದ್ದರಾಮಯ್ಯ ಕಾಲದಲ್ಲಾದ್ರು ಇದು ಕ್ಲೀನ್ ಆಗುತ್ತೆ ಅಂದುಕೊಂಡೆ. ಕಳೆದ ನಾಲ್ಕು ವರ್ಷಗಳಿಂದ ಈ ಹಗರಣ ನಡೆದಿದೆ" ಎಂದು ದೂರಿದರು.
ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ ಹತ್ತುತ್ತಿಲ್ಲ: "ಸರ್ಕಾರದ ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ಗಳನ್ನು ಹತ್ತುತ್ತಿಲ್ಲ. ಇದರಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹನಗಳಿಗೆ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಆಳವಡಿಕೆಗೆ ಕೇಂದ್ರ ಸರ್ಕಾರ ನಿಯಮ ಜಾರಿಗೆ ತಂದಿದೆ. ಈ ಮಧ್ಯ ಜಿಪಿಎಸ್ ಅಳವಡಿಸಲು ಒಂದ ರಿಂದ ಎರಡು ಸಾವಿರ ರೂ. ಖರ್ಚಾಗುತ್ತದೆ. ಆದರೆ ಜಿಪಿಎಸ್ ಅಳವಡಿಕೆಗೆ ಖಾಸಗಿ ಕಂಪನಿ 12 ಸಾವಿರ ನಿಗದಿ ಮಾಡಿರುವುದು ಸರಿಯಲ್ಲ, ಇದನ್ನ ವಾಪಸ್ ಪಡೆಯಬೇಕು. ಲೋಪವನ್ನ ಸರಿಮಾಡಬೇಕು" ಎಂದು ಆಗ್ರಹಿಸಿದರು.
Mysuru former MP Pratap Simha slams CM Siddaramaiah, on muda scam, says have lost little respect for CM.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm