ಬ್ರೇಕಿಂಗ್ ನ್ಯೂಸ್
22-07-24 10:21 pm HK News Desk ಕರ್ನಾಟಕ
ಮೈಸೂರು, ಜುಲೈ 22: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವುದು ನಾನೂರು, ಐನೂರು ಕೋಟಿ ರೂಪಾಯಿ ಹಗರಣ ಆಲ್ಲ. ಕನಿಷ್ಠ ಮೂರ್ನಾಲ್ಕು ಸಾವಿರ ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಮುಡಾ ಹಗರಣ ವಿಚಾರವಾಗಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮುಡಾ ಹಗರಣ ಕುರಿತು ಸಂಪೂರ್ಣ ತನಿಖೆ ಮಾಡಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮನಸ್ಥಿತಿ ಸಿದ್ದರಾಮಯ್ಯ ಅವರಿಗೆ ಇಲ್ಲ" ಎಂದು ಹೇಳಿದರು.
"ಸಿಎಂ ಸಿದ್ದರಾಮಯ್ಯ ಸಾಹೇಬ್ರ ಬಗ್ಗೆ ಸೈದ್ಧಾಂತಿಕವಾಗಿ ವಿರೋಧ ಅಷ್ಟೇ. ಅಭಿವೃದ್ಧಿ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಸಿಎಂ ತಮಗೆ ಬಂದ ಸೈಟ್ ಗಳನ್ನ ವಾಪಸ್ ಕೊಟ್ಟು ತನಿಖೆ ಮಾಡಿಸುತ್ತಾರೆ ಎಂದು ನಾನು ನಂಬಿದೆ. ಆದರೆ ಆ ರೀತಿ ಮಾಡದೆ 62 ಕೋಟಿ ಪರಿಹಾರ ಕೇಳಿದ್ದಾರೆ. ಇದು ನನಗೆ ಸಿಎಂ ಬಗ್ಗೆ ದೊಡ್ಡ ಮಟ್ಟದ ನಿರಾಸೆ ಉಂಟು ಮಾಡಿದೆ. ಸಿಎಂ ಮೇಲೆ ಇದ್ದ ಅಭಿಮಾನವೂ ಕೂಡ ಈ ಪ್ರಕರಣದಿಂದ ಕಡಿಮೆಯಾಗಿದೆ" ಎಂದರು.
"2019 ರಲ್ಲಿ ವಿ. ಸೋಮಣ್ಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ 7,500 ಮುಡಾ ಖಾಲಿ ನಿವೇಶನಗಳ ಹರಾಜಿಗೆ ಮುಂದಾಗಿದ್ದರು. ಅಷ್ಟರಲ್ಲೇ ಅವರಿಗೆ ಗೇಟ್ ಪಾಸ್ ಸಿಕ್ಕಿತ್ತು. ಮುಡಾ ಆಯುಕ್ತರಾದ ಕಾಂತರಾಜ್ ಅವರಿಗೂ ಗೇಟ್ ಪಾಸ್ ಸಿಕ್ಕತ್ತು. ಇದು ಮುಡಾದ ವ್ಯವಸ್ಥೆ. ಆದರೆ ಸಿದ್ದರಾಮಯ್ಯ ಕಾಲದಲ್ಲಾದ್ರು ಇದು ಕ್ಲೀನ್ ಆಗುತ್ತೆ ಅಂದುಕೊಂಡೆ. ಕಳೆದ ನಾಲ್ಕು ವರ್ಷಗಳಿಂದ ಈ ಹಗರಣ ನಡೆದಿದೆ" ಎಂದು ದೂರಿದರು.
ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ ಹತ್ತುತ್ತಿಲ್ಲ: "ಸರ್ಕಾರದ ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ಗಳನ್ನು ಹತ್ತುತ್ತಿಲ್ಲ. ಇದರಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹನಗಳಿಗೆ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಆಳವಡಿಕೆಗೆ ಕೇಂದ್ರ ಸರ್ಕಾರ ನಿಯಮ ಜಾರಿಗೆ ತಂದಿದೆ. ಈ ಮಧ್ಯ ಜಿಪಿಎಸ್ ಅಳವಡಿಸಲು ಒಂದ ರಿಂದ ಎರಡು ಸಾವಿರ ರೂ. ಖರ್ಚಾಗುತ್ತದೆ. ಆದರೆ ಜಿಪಿಎಸ್ ಅಳವಡಿಕೆಗೆ ಖಾಸಗಿ ಕಂಪನಿ 12 ಸಾವಿರ ನಿಗದಿ ಮಾಡಿರುವುದು ಸರಿಯಲ್ಲ, ಇದನ್ನ ವಾಪಸ್ ಪಡೆಯಬೇಕು. ಲೋಪವನ್ನ ಸರಿಮಾಡಬೇಕು" ಎಂದು ಆಗ್ರಹಿಸಿದರು.
Mysuru former MP Pratap Simha slams CM Siddaramaiah, on muda scam, says have lost little respect for CM.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am