ಬ್ರೇಕಿಂಗ್ ನ್ಯೂಸ್
22-07-24 10:21 pm HK News Desk ಕರ್ನಾಟಕ
ಮೈಸೂರು, ಜುಲೈ 22: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವುದು ನಾನೂರು, ಐನೂರು ಕೋಟಿ ರೂಪಾಯಿ ಹಗರಣ ಆಲ್ಲ. ಕನಿಷ್ಠ ಮೂರ್ನಾಲ್ಕು ಸಾವಿರ ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಮುಡಾ ಹಗರಣ ವಿಚಾರವಾಗಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮುಡಾ ಹಗರಣ ಕುರಿತು ಸಂಪೂರ್ಣ ತನಿಖೆ ಮಾಡಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮನಸ್ಥಿತಿ ಸಿದ್ದರಾಮಯ್ಯ ಅವರಿಗೆ ಇಲ್ಲ" ಎಂದು ಹೇಳಿದರು.
"ಸಿಎಂ ಸಿದ್ದರಾಮಯ್ಯ ಸಾಹೇಬ್ರ ಬಗ್ಗೆ ಸೈದ್ಧಾಂತಿಕವಾಗಿ ವಿರೋಧ ಅಷ್ಟೇ. ಅಭಿವೃದ್ಧಿ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಸಿಎಂ ತಮಗೆ ಬಂದ ಸೈಟ್ ಗಳನ್ನ ವಾಪಸ್ ಕೊಟ್ಟು ತನಿಖೆ ಮಾಡಿಸುತ್ತಾರೆ ಎಂದು ನಾನು ನಂಬಿದೆ. ಆದರೆ ಆ ರೀತಿ ಮಾಡದೆ 62 ಕೋಟಿ ಪರಿಹಾರ ಕೇಳಿದ್ದಾರೆ. ಇದು ನನಗೆ ಸಿಎಂ ಬಗ್ಗೆ ದೊಡ್ಡ ಮಟ್ಟದ ನಿರಾಸೆ ಉಂಟು ಮಾಡಿದೆ. ಸಿಎಂ ಮೇಲೆ ಇದ್ದ ಅಭಿಮಾನವೂ ಕೂಡ ಈ ಪ್ರಕರಣದಿಂದ ಕಡಿಮೆಯಾಗಿದೆ" ಎಂದರು.
"2019 ರಲ್ಲಿ ವಿ. ಸೋಮಣ್ಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ 7,500 ಮುಡಾ ಖಾಲಿ ನಿವೇಶನಗಳ ಹರಾಜಿಗೆ ಮುಂದಾಗಿದ್ದರು. ಅಷ್ಟರಲ್ಲೇ ಅವರಿಗೆ ಗೇಟ್ ಪಾಸ್ ಸಿಕ್ಕಿತ್ತು. ಮುಡಾ ಆಯುಕ್ತರಾದ ಕಾಂತರಾಜ್ ಅವರಿಗೂ ಗೇಟ್ ಪಾಸ್ ಸಿಕ್ಕತ್ತು. ಇದು ಮುಡಾದ ವ್ಯವಸ್ಥೆ. ಆದರೆ ಸಿದ್ದರಾಮಯ್ಯ ಕಾಲದಲ್ಲಾದ್ರು ಇದು ಕ್ಲೀನ್ ಆಗುತ್ತೆ ಅಂದುಕೊಂಡೆ. ಕಳೆದ ನಾಲ್ಕು ವರ್ಷಗಳಿಂದ ಈ ಹಗರಣ ನಡೆದಿದೆ" ಎಂದು ದೂರಿದರು.
ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ ಹತ್ತುತ್ತಿಲ್ಲ: "ಸರ್ಕಾರದ ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ಗಳನ್ನು ಹತ್ತುತ್ತಿಲ್ಲ. ಇದರಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹನಗಳಿಗೆ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಆಳವಡಿಕೆಗೆ ಕೇಂದ್ರ ಸರ್ಕಾರ ನಿಯಮ ಜಾರಿಗೆ ತಂದಿದೆ. ಈ ಮಧ್ಯ ಜಿಪಿಎಸ್ ಅಳವಡಿಸಲು ಒಂದ ರಿಂದ ಎರಡು ಸಾವಿರ ರೂ. ಖರ್ಚಾಗುತ್ತದೆ. ಆದರೆ ಜಿಪಿಎಸ್ ಅಳವಡಿಕೆಗೆ ಖಾಸಗಿ ಕಂಪನಿ 12 ಸಾವಿರ ನಿಗದಿ ಮಾಡಿರುವುದು ಸರಿಯಲ್ಲ, ಇದನ್ನ ವಾಪಸ್ ಪಡೆಯಬೇಕು. ಲೋಪವನ್ನ ಸರಿಮಾಡಬೇಕು" ಎಂದು ಆಗ್ರಹಿಸಿದರು.
Mysuru former MP Pratap Simha slams CM Siddaramaiah, on muda scam, says have lost little respect for CM.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm