ಬ್ರೇಕಿಂಗ್ ನ್ಯೂಸ್
22-07-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22: ಅಂಕೋಲಾದ ಶಿರೂರಿನಲ್ಲಿ ಭಾರೀ ಭೂಕುಸಿತದ ನಂತರ ರಸ್ತೆಯಲ್ಲಿ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲಾಗಿದೆ. ಆದರೆ ಮಣಿನಡಿಯಲ್ಲಿ ಸಿಲುಕಿದವರು ಅಥವಾ ಟ್ರಕ್ ಬಗ್ಗೆ ಸುಳಿವು ಸಿಕ್ಕಿಲ್ಲ. ಮೂವರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು ಇನ್ನೀಗ ಪಕ್ಕದ ನದಿ ಗಂಗಾವಳಿಯಲ್ಲಿ ಶೋಧ ಆರಂಭಿಸಲಾಗಿದೆ.
ಶಿರೂರು ಗುಡ್ಡಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ರಸ್ತೆಯಲ್ಲಿ ಬಿದ್ದ ಮಣ್ಣಿನಡಿಯಲ್ಲಿ ಶೋಧ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ನಮಗೆ ಯಾವುದೇ ಬದುಕುಳಿದವರ ಅಥವಾ ಮೃತರ ಪತ್ತೆಯಾಗಿಲ್ಲ. ನಾವು ನದಿ ಮತ್ತು ತೆರೆದ ನೀರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಂಗಾವಳಿ ನದಿಯತ್ತ ಗಮನ ಹರಿಸಲಾಗಿದೆ. ನದಿಯ ಭಾಗದಲ್ಲಿ ಡೀಪ್ ಡೈವರ್ಗಳು ನೀರಿಗೆ ಧುಮುಕಿ ಟ್ರಕ್ ಕ್ಯಾಬಿನ್ ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ಡಿಆರ್ಎಫ್), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆ ಮುಂದುವರೆಸಿವೆ. ಸ್ಥಳದಲ್ಲಿ 150ಕ್ಕೂ ಹೆಚ್ಚು ಸಿಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ನ ಅಧಿಕಾರಿ, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 55 ಜನ ಇತರರು, ಪುಣೆಯ ಮಿಲಿಟರಿ ಇಂಜಿನಿಯರಿಂಗ್ ಕಾಲೇಜಿನ ಒಬ್ಬ ಜೂನಿಯರ್ ಕಮಿಷನ್ಡ್ ಅಧಿಕಾರಿ ಸಹ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ ಎಂದರು.
ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸೋಮವಾರಕ್ಕೆ ಏಳು ದಿನವಾಗಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ಇದುವರೆಗೆ 7 ಮಂದಿಯ ಶವ ಮಾತ್ರ ಪತ್ತೆಯಾಗಿದೆ. ಕೇರಳ ಮೂಲದ ಲಾರಿಯೊಂದು ಮಣ್ಣಿನಲ್ಲಿ ಹೂತು ಹೋಗಿದೆಯೆಂದು ಹೇಳಲಾಗುತ್ತಿದ್ದು ಅದರ ಚಾಲಕನ ಪತ್ತೆಗಾಗಿ ಕೇರಳ ಸರ್ಕಾರದ ಅಧಿಕಾರಿಗಳು, ಆತನ ಕುಟುಂಬಸ್ಥರು, ಅಲ್ಲಿನ ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
No survivor or truck was found under the accumulated mud on the road following a massive landslide in Shirur village in Uttara Kannada district and the focus has now shifted to the Gangavalli river to trace the three missing people, including a driver from Kerala, officials said on Monday. Seven bodies have been recovered so far since the incident on July 16, they said.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm