ಬ್ರೇಕಿಂಗ್ ನ್ಯೂಸ್
23-07-24 01:13 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.23: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಪರಿಷತ್ತಿನ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಪರಿಶಿಷ್ಟ ಸಮುದಾಯದ ಪ್ರಭಾವಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿ ಛಲವಾದಿ ನಾರಾಯಾಣಸ್ವಾಮಿಗೆ ಅಭಿನಂದನೆ ತಿಳಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ಹೋರಾಟ ನಡೆಸಿಕೊಂಡು ಬಂದ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ 'ಸಾಮಾಜಿಕ ನ್ಯಾಯ' ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.


ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಇದೀಗ ಪಕ್ಷವು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ಸಿಟಿ ರವಿ ಆ ಸ್ಥಾನಕ್ಕೇರುತ್ತಾರೆಂದು ಹೇಳಲಾಗಿತ್ತು. ಇತ್ತೀಚೆಗೆ ಸಿಟಿ ರವಿ ಪರಿಷತ್ ಸದಸ್ಯರಾದ ಸಂದರ್ಭದಲ್ಲಿ ಅವರೇ ಮೇಲ್ಮನೆ ನಾಯಕ ಸ್ಥಾನಕ್ಕೇರುತ್ತಾರೆಂದು ಬಿಂಬಿತವಾಗಿತ್ತು. ವಿಧಾನಸಭೆ ವಿಪಕ್ಷ ನಾಯಕ ಸ್ಥಾನದಲ್ಲೂ ಒಕ್ಕಲಿಗ ವರ್ಗದ ಆರ್.ಅಶೋಕ್ ಇರುವುದರಿಂದ ಸಿಟಿ ಸೀಟು ತಪ್ಪಿಸಿಕೊಂಡಿದ್ದಾರೆ.
ಮೇಲ್ಮನೆಯಲ್ಲಿ ಎನ್ಡಿಎ ಬಹುಮತ ಹೊಂದಿದ್ದು ಕಾಂಗ್ರೆಸ್ 35 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿದ್ದರೂ, ಬಿಜೆಪಿ - 25 ಹಾಗೂ ಅದರ ಮಿತ್ರ ಪಕ್ಷ ಜೆಡಿಎಸ್ 8 ಮತ್ತು ಸ್ವತಂತ್ರ ಸದಸ್ಯರನ್ನು ಸೇರಿಸಿದರೆ ಒಟ್ಟು 38 ಸ್ಥಾನಗಳನ್ನು ಹೊಂದಿದೆ.
Chalavadi Narayana Swamy appointed as opposition leader by BJP in the place of Kota Srinivas Poojary.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm