ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am