ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm