ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm